July 23, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
 
ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್ ಡಿ ಎಂ ಐಟಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿರಿಯರು ಸಾಗಿಸುತ್ತಿದ್ದ ಜೀವನ ಮತ್ತು ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳ ಬಗ್ಗೆ ತಿಳಿಸಿದರು. 
 
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಸಂಸ್ಕೃತಿ ಸಾರುವ ಹಳೆಯ ವಸ್ತುಗಳ ಪ್ರದರ್ಶನ, ಆಟಿ ತಿಂಗಳಿನ ವಿಶೇಷ ಆಹಾರ ವಸ್ತುಗಳ ಪ್ರದರ್ಶನ, ಶಾಲೆಯ ಗದ್ದೆಯಲ್ಲಿ ಹಗ್ಗ ಜಗ್ಗಾಟ, ಲೆಮನ್ ಮತ್ತು ಸ್ಪೂನ್ ಓಟ ಹಾಗೂ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
 
ವಿದ್ಯಾರ್ಥಿಗಳಾದ ಚಿನ್ಮಯ್ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ನಿಧಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya
error: Content is protected !!