ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಇಲ್ಲಿ ಸುಮಾರು 10 ವರ್ಷದಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಪುಂಜಾಲಕಟ್ಟೆ ಪ್ರೌಢಶಾಲೆಗೆ ವರ್ಗಾವಣೆಗೊಂಡ ಮೋಹನಾನಂದ ಮತ್ತು ಕಳೆದ ಆರು ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಇವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದು ಇವರಿಗೆ ಆ.17 ರಂದು ಸರಕಾರಿ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ರವಿಕುಮಾರ್ ಹಾಗೂ ಎಸ್ ಡಿ ಎಂ ಸಿ ಯ ಸದಸ್ಯರುಗಳಾಗಿರುವ ಶ್ರೀನಿವಾಸ್ ಕುಲಾಲ್, ಕೊರಗಪ್ಪ ಕುಂಬಾರ , ವಸಂತ ಕೃಷ್ಣಪ್ಪ ಮತ್ತು ಶ್ರೀಮತಿ ಶಶಿಕಲ ಇವರುಗಳ ಮುಂದಾಳತ್ವದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ಕುಮಾರಿ ಅಂಜಲಿ ಸ್ವಾಗತಿಸಿ, ಕುಮಾರಿ ಸಾಧನ ಧನ್ಯವಾದವಿತ್ತರು