23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಇಲ್ಲಿ ಸುಮಾರು 10 ವರ್ಷದಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಪುಂಜಾಲಕಟ್ಟೆ ಪ್ರೌಢಶಾಲೆಗೆ ವರ್ಗಾವಣೆಗೊಂಡ ಮೋಹನಾನಂದ ಮತ್ತು ಕಳೆದ ಆರು ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಇವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದು ಇವರಿಗೆ ಆ.17 ರಂದು ಸರಕಾರಿ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ರವಿಕುಮಾರ್ ಹಾಗೂ ಎಸ್ ಡಿ ಎಂ ಸಿ ಯ ಸದಸ್ಯರುಗಳಾಗಿರುವ ಶ್ರೀನಿವಾಸ್ ಕುಲಾಲ್, ಕೊರಗಪ್ಪ ಕುಂಬಾರ , ವಸಂತ ಕೃಷ್ಣಪ್ಪ ಮತ್ತು ಶ್ರೀಮತಿ ಶಶಿಕಲ ಇವರುಗಳ ಮುಂದಾಳತ್ವದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ಕುಮಾರಿ ಅಂಜಲಿ ಸ್ವಾಗತಿಸಿ, ಕುಮಾರಿ ಸಾಧನ ಧನ್ಯವಾದವಿತ್ತರು

Related posts

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya
error: Content is protected !!