23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ನಿಡ್ಲೆ : ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ಕೊಕ್ಕಡ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗಪ್ಪ ಗೌಡ ತಾಲೂಕು ಜನಜಾಗೃತಿ ಸದಸ್ಯರು ನೆರವೇರಿಸಿ ಶುಭಹಾರೈಸಿದರು.


ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶಾಂತಶೆಟ್ಟಿ ಯವರು ವಹಿಸಿದ್ದು ಮಕ್ಕಳಿಗೆ ಬೇಕಾದ ಉತ್ತಮ ಮಾಹಿತಿ ನೀಡುವುದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಶ್ಲಾಘನೇ ವ್ಯಕ್ತಪಡಿಸಿದರು.
ಸಂಪನ್ಮೂಲ ವ್ಯಕ್ತಿ ಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ದೇವಿಪ್ರಸಾದ್ ರವರು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯೊಂದಿಗೆ ಪ್ರತಿಜ್ಞೆ ಮಾಡಿಸಿದರು.

ಶಾಲಾ ಸಹಶಿಕ್ಷಕಿ ಸುಚಿತ್ರ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದವಿತ್ತರು. ಸೇವಾಪ್ರತಿನಿಧಿ ಸೇಸಪ್ಪ ಗೌಡ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya
error: Content is protected !!