24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಹರ್ಷಕುಮಾರ್ ಉಜರೆಯವರು ಮಾತನಾಡುತ್ತಾ, ವರ್ಷಕ್ಕೊಮ್ಮೆ ಆಚರಿಸುವ ರಾಷ್ಟ್ರೀಯ ಹಬ್ಬ ಇದು. ಈ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರನ್ನು ನೆನೆದು, ಅವರ ಬದುಕಿನ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು. ಇನ್ನೋರ್ವ ಅತಿಥಿಗಳಾದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲರವರು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು.

ಆರಂಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಕೊಲ್ಲಿಮಾರ್ ರವರು ಧ್ವಜಾರೋಹಣ ಮಾಡಿ ಶುಭಹಾರೃಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಯವರು ಹಾಜರಿದ್ದರು.

ವಿದ್ಯಾರ್ಥಿಗಳಾದ ಮನೋಜ್, ಇಂದುಮತಿ ಮತ್ತು ಫಾತಿಮತ್ ಝುಹ ಅನಿಸಿಕೆ ವ್ಯಕ್ತಪಡಿಸಿದರು. ಶ್ರೇಯಸ್ ಸ್ವಾಗತಿಸಿ, ರಕ್ಷಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕಲಾ ಕಾರ್ಯಕ್ರಮಗಳು ಜರಗಿತು.

Related posts

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!