September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
 
ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್ ಡಿ ಎಂ ಐಟಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿರಿಯರು ಸಾಗಿಸುತ್ತಿದ್ದ ಜೀವನ ಮತ್ತು ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳ ಬಗ್ಗೆ ತಿಳಿಸಿದರು. 
 
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಸಂಸ್ಕೃತಿ ಸಾರುವ ಹಳೆಯ ವಸ್ತುಗಳ ಪ್ರದರ್ಶನ, ಆಟಿ ತಿಂಗಳಿನ ವಿಶೇಷ ಆಹಾರ ವಸ್ತುಗಳ ಪ್ರದರ್ಶನ, ಶಾಲೆಯ ಗದ್ದೆಯಲ್ಲಿ ಹಗ್ಗ ಜಗ್ಗಾಟ, ಲೆಮನ್ ಮತ್ತು ಸ್ಪೂನ್ ಓಟ ಹಾಗೂ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
 
ವಿದ್ಯಾರ್ಥಿಗಳಾದ ಚಿನ್ಮಯ್ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ನಿಧಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya
error: Content is protected !!