July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು.


ಶಾಲೆಗೆ ಸರಕಾರದಿಂದ ಅನುದಾನ ಮಂಜೂರುಗೊಂಡು ನೂತನ ಕಟ್ಟಡ ನಿರ್ಮಾಣವಾಗಿದ್ದು, ಶಾಲೆಯ ಸ್ಥಳಾಂತರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.


ನೂತನ ಕಟ್ಟಡದಲ್ಲಿ ಕೇವಲ ಎಂಟು ಕೊಠಡಿಗಳಷ್ಟೇ ಇದ್ದು, ಮಕ್ಕಳ ಸಂಖ್ಯೆಗನುಗುಣವಾಗಿ ಇನ್ನಷ್ಟು ತರಗತಿ ಕೊಠಡಿಗಳು, ಶಿಕ್ಷಕರ ಮತ್ತು ಕಚೇರಿ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯಗಳು ಮುಂತಾದ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಸಭೆಯನ್ನು ಚರ್ಚೆ ನಡೆಯಿತು.


ಶಾಲೆಯ ಉಪಪ್ರಾಚಾರ್ಯರಾದ ವೆಂಕಟೇಶ್ ಎಸ್. ತುಳುಪುಳೆ ಅವರು ಮಾತನಾಡಿ, ಶಾಲೆಯಲ್ಲಿ ಪ್ರಸ್ತುತ 3 ತರಗತಿಗಳಲ್ಲಿ 600 ವಿದ್ಯಾರ್ಥಿಗಳು ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಇದು ತಾಲೂಕು ಮಾತ್ರವಲ್ಲದೆ ಜಿಲ್ಲೆಯಲ್ಲೇ ಸರಕಾರಿ ಶಾಲೆಯ ಅತ್ಯಧಿಕ ಮಕ್ಕಳಿರುವ ಶಾಲೆಯಾಗಿದೆ. ಇಲ್ಲಿ ವರ್ಷಕ್ಕಿಂತ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಮೂಲಸೌಲಭ್ಯಗಳ ಕೊರತೆ ಎದುರಾಗಿದೆ. ಶಾಲೆಯ ಪೂರ್ಣ ತರಗತಿಗಳನ್ನು ಸ್ಥಳಾಂತರ ಮಾಡಲೂ ಸಾಧ್ಯವಾಗುತ್ತಿಲ್ಲ ಎಂದರು.


ಸರಕಾರದಿಂದ ಅನುದಾನದ ಬೇಡಿಕೆ ಇಡುವುದರ ಜತೆಗೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸಿ ನೂತನ ಕಟ್ಟಡದಲ್ಲಿ ಮೂಲಸೌಲಭ್ಯಗಳನ್ನು ತಾತ್ಕಾಲಿಕವಾಗಿ ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸಲಾಯಿತು.


ಇದೇ ಸಂದರ್ಭದಲ್ಲಿ ಶಿಕ್ಷಕ ವ್ರಂದದವರು ಹಾಗೂ ಹಲವು ಹಿರಿಯ ವಿದ್ಯಾರ್ಥಿಗಳು ದೇಣಿಗೆಯನ್ನು ಶಾಲೆಗೆ ಹಸ್ತಾಂತರಿಸಿದರು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಂಗೀತ ಶಿಕ್ಷಕಿ ಅನುಸೂಯ ಪಾಟಕ್ ಪ್ರಾರ್ಥಿಸಿ, ಜ್ಯೋತಿ ಜ್ಯುಲಿಯೆಟ್ ಸ್ವಾಗತಿಸಿದರು. ಶಿಕ್ಷಕ ರವೀಂದ್ರ ಅವರು ಪ್ರಾಸ್ತಾವಿಸಿ, ವಂದಿಸಿದರು.

Related posts

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!