April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

ಧರ್ಮಸ್ಥಳ: ಭಾರತದ ಸಿವಿಲ್ 20 ಮತ್ತು ಯೂತ್ 20 ವರ್ಕೀಂಗ್ ಗ್ರೂಪ್‌ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ ಚೇಂಜ್‌ಮೇಕರ್20 ಶೃಂಗಸಭೆಯು 60 ಕ್ಕೂ ಹೆಚ್ಚು ದೇಶಗಳ ಯುವ ಬದಲಾವಣೆ ಮಾಡುವವರು, ನಾಯಕರು ಮತ್ತು ಪ್ರಭಾವಿಗಳಿಗೆ ಸಹಕರಿಸಲು, ಆವಿಷ್ಕರಿಸಲು ಮತ್ತು ಸುಸ್ಥಿರ ಪರಿಹಾರಗಳನ್ನು ಚಾಲನೆ ಮಾಡಲು ಜಾಗತಿಕ ವೇದಿಕೆಯಾಗಿದ್ದು ಈ ವೇದಿಕೆಯ ಮೂಲಕ ಆಯೋಜಿಸಲಾಗಿದ್ದ ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣದ ವಿಷಯದ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ಆ.16 ರಂದು ವಿಸ್ಜೃತವಾಗಿ ವೀಡಿಯೋ ಕಾನ್ಪರೆನ್ಸ್ ಮೂಲಕ ತಮ್ಮ ವಿಚಾರಧಾರೆಯನ್ನು ಮಂಡಿಸಿದರು. ಸಾವಿರಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಆಸಕ್ತರು ಈ ವೀಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ಹೆಗ್ಗಡೆಯವರ ಭಾಷಣದ ನಂತರದ ಪ್ರಶ್ನೋತ್ತರದಲ್ಲಿ ಬಹಳಷ್ಟು ಆಸಕ್ತರು ಹೆಗ್ಗಡೆಯವರಲ್ಲಿ ಮಹಿಳೆಯ ಸಬಲೀಕರಣದ ಕುರಿತು ಕೇಳಿದ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ಹೆಗ್ಗಡೆಯವರು ನೀಡಿದರು.

ಎಲ್ಲಾ ರಂಗಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಪ್ರಸ್ತುತ ಆದ್ಯತೆಯಾಗಿರಬೇಕು ಎಂದು ನಾನು ಹೇಳಲು ಬಯಸುತ್ತೇನೆ. ಲಿಂಗ ಸಮಾನತೆಯು ಸಮಾನತೆಯ ಸಮಾಜವನ್ನು ಸೃಷ್ಟಿಸುವುದು ಮಾತ್ರವಲ್ಲದೆ ದೇಶವು ಜಾಗತಿಕವಾಗಿ ಎದ್ದು ಕಾಣಲು ಸಹಾಯ ಮಾಡುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Related posts

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
error: Content is protected !!