23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

ಧರ್ಮಸ್ಥಳ: ಭಾರತದ ಸಿವಿಲ್ 20 ಮತ್ತು ಯೂತ್ 20 ವರ್ಕೀಂಗ್ ಗ್ರೂಪ್‌ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ ಚೇಂಜ್‌ಮೇಕರ್20 ಶೃಂಗಸಭೆಯು 60 ಕ್ಕೂ ಹೆಚ್ಚು ದೇಶಗಳ ಯುವ ಬದಲಾವಣೆ ಮಾಡುವವರು, ನಾಯಕರು ಮತ್ತು ಪ್ರಭಾವಿಗಳಿಗೆ ಸಹಕರಿಸಲು, ಆವಿಷ್ಕರಿಸಲು ಮತ್ತು ಸುಸ್ಥಿರ ಪರಿಹಾರಗಳನ್ನು ಚಾಲನೆ ಮಾಡಲು ಜಾಗತಿಕ ವೇದಿಕೆಯಾಗಿದ್ದು ಈ ವೇದಿಕೆಯ ಮೂಲಕ ಆಯೋಜಿಸಲಾಗಿದ್ದ ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣದ ವಿಷಯದ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ಆ.16 ರಂದು ವಿಸ್ಜೃತವಾಗಿ ವೀಡಿಯೋ ಕಾನ್ಪರೆನ್ಸ್ ಮೂಲಕ ತಮ್ಮ ವಿಚಾರಧಾರೆಯನ್ನು ಮಂಡಿಸಿದರು. ಸಾವಿರಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಆಸಕ್ತರು ಈ ವೀಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ಹೆಗ್ಗಡೆಯವರ ಭಾಷಣದ ನಂತರದ ಪ್ರಶ್ನೋತ್ತರದಲ್ಲಿ ಬಹಳಷ್ಟು ಆಸಕ್ತರು ಹೆಗ್ಗಡೆಯವರಲ್ಲಿ ಮಹಿಳೆಯ ಸಬಲೀಕರಣದ ಕುರಿತು ಕೇಳಿದ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ಹೆಗ್ಗಡೆಯವರು ನೀಡಿದರು.

ಎಲ್ಲಾ ರಂಗಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಪ್ರಸ್ತುತ ಆದ್ಯತೆಯಾಗಿರಬೇಕು ಎಂದು ನಾನು ಹೇಳಲು ಬಯಸುತ್ತೇನೆ. ಲಿಂಗ ಸಮಾನತೆಯು ಸಮಾನತೆಯ ಸಮಾಜವನ್ನು ಸೃಷ್ಟಿಸುವುದು ಮಾತ್ರವಲ್ಲದೆ ದೇಶವು ಜಾಗತಿಕವಾಗಿ ಎದ್ದು ಕಾಣಲು ಸಹಾಯ ಮಾಡುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!