23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ನ್ಯಾಯತರ್ಪು ಕಳಿಯ ಇದರ ಆಶ್ರಯದಲ್ಲಿ ಆ.17 ರಂದು ಗೇರುಕಟ್ಟೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ವರಮಹಾಲಕ್ಷ್ಮಿ ಸಮಿತಿಯ ರಚನೆ ನಡೆಸಲಾಯಿತು.

ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಭಾಷಿಣಿ. ಕೆ, ಉಪಾಧ್ಯಕ್ಷರಾಗಿ ಶ್ರೀಮತಿ ಶಾಲಿನಿ ಸತೀಶ್, ಕಾರ್ಯದರ್ಶಿಯಾಗಿ ಶ್ರೀಮತಿ ಪುಷ್ಪ ನ್ಯಾಯತರ್ಪು, ಜೊತೆ ಕಾರ್ಯದರ್ಶಿ ಶ್ರೀಮತಿ ಕುಸುಮಾವತಿ ಬರಾಯ, ಕೋಶಾಧಿಕಾರಿಯಾಗಿ ಶ್ರೀಮತಿ ಪ್ರತಿಭಾ ಎಮ್ ಗೇರುಕಟ್ಟೆ ಆಯ್ಕೆಯಾಗಿರುತ್ತಾರೆ.


ಸಭೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ದಿವಾಕರ ಎಮ್, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕುಸುಮ ಎಮ್ ಬಂಗೇರ , ಗ್ರಾಮ ಸಮಿತಿಯ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ್ ಮಜಲ್ ಮತ್ತು ಪುಷ್ಪ, ಹಾಗೂ ವರಮಹಾಲಕ್ಷ್ಮಿ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಮಮತಾ ರವರು ಹಾಗೂ ನ್ಯಾಯಾತರ್ಪು ಒಕ್ಕೂಟದ ಅಧ್ಯಕ್ಷರಾದ ಜನಾರ್ದನ ಗೌಡ ಮತ್ತು ಕಳಿಯ ಬಿ ಒಕ್ಕೂಟದ ಅಧ್ಯಕ್ಷರಾದ ಪ್ರಕಾಶ್ ಮೇರ್ಲ ಹಾಗೂ ಪದಾಧಿಕಾರಿಗಳು, ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ಮತ್ತು ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ಸೇವಾಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆ, ಖರ್ಚು ವೆಚ್ಚ ಮತ್ತು ಆ.25 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.

Related posts

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!