ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Leave a Comment

error: Content is protected !!