July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!