ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬವನ್ನು ಹರೀಶ್ ಪೂಂಜ ಅಭಿಮಾನಿ ಬಳಗದವರು ವೇಣೂರು ಕ್ರಿಸ್ತರಾಜ್ ನವ ಚೇತನ ವಿಶೇಷ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ಸಿಹಿ ತಿಂಡಿಯನ್ನು ನೀಡುವುದರ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಯುವ ಉದ್ಯಮಿ ರಾಜೇಶ್ ಪೂಜಾರಿ ಕೊಪ್ಪದಬಾಕಿಮಾರ್, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್, ನಾರಾವಿ ಶಕ್ತಿ ಕೇಂದ್ರದ ಕಾರ್ಯದರ್ಶಿ ನಿತೀಶ್ ಗುಂಡೂರಿ, ಗುತ್ತಿಗೆದಾರ ಪ್ರತೀಶ್ ಪೂಜಾರಿ ಪೆರಿಂಜೆ, ಪ್ರಮುಖರಾದ ರಮೇಶ್ ಹೆಗ್ಡೆ, ಪ್ರವೀಣ ಹೆಗ್ಡೆ ಹಾಗೂ ಹರೀಶ್ ಪೂಂಜರವರ ಅಭಿಮಾನಿಗಳು ಉಪಸ್ಥಿತರಿದ್ದರು.

Leave a Comment

error: Content is protected !!