September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ,ಸಮಾಜ ಸೇವಕ ಮೋಹನ್ ಕುಮಾರ್ ರವರು ಯೋಗಾಸನ ಸ್ಪರ್ಧೆಗೆ ಕಲ್ಮಂಜ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಿಸಿದ್ದರು.

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ ನಡ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನದಲ್ಲಿ 17 ರ ಒಳಗಿನ ವಯೋಮಾನದ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ತಾಲೂಕು ಮಟ್ಟದಲ್ಲಿ ಚಾಂಪಿಯನ್ ಶಿಪ್ ಪಡೆದು ಉಜಿರೆ ಉದ್ಯಮಿ ಮೋಹನ್ ಕುಮಾರ್ ಅವರನ್ನು ವಿದ್ಯಾರ್ಥಿಗಳು ಕನಸಿನ ಮನೆ ಉಜಿರೆಯಲ್ಲಿ ಬೇಟಿಯಾಗಿ ಆಶೀರ್ವಾದ ಪಡೆದರು.

17 ರ ವಯೋಮಾನದ ವಿಭಾಗದಲ್ಲಿ ಕಲ್ಮಂಜ ಪ್ರೌಢ ಶಾಲೆಯ 5 ಬಾಲಕರು ಮತ್ತು ಇಬ್ಬರು ಬಾಲಕಿಯರು ವಿಜೇತರಾಗಿ ಆ.31 ರಂದು ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಆಂಗ್ಲ ಭಾಷಾ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಪಿ ರವರು ತರಬೇತಿಯನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಉಪಸ್ಥಿತರಿದ್ದರು.

Related posts

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

“ಯಕ್ಷಸಿರಿ ವಾರ್ಷಿಕ ಪ್ರಶಸ್ತಿ”ಗೆ ರಾಘವೇಂದ್ರ ಅಸ್ರಣ್ಣ ಹಾಗೂ ಉಜಿರೆ ನಾರಾಯಣ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya
error: Content is protected !!