ನಿಡ್ಲೆ : ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ಕೊಕ್ಕಡ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗಪ್ಪ ಗೌಡ ತಾಲೂಕು ಜನಜಾಗೃತಿ ಸದಸ್ಯರು ನೆರವೇರಿಸಿ ಶುಭಹಾರೈಸಿದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶಾಂತಶೆಟ್ಟಿ ಯವರು ವಹಿಸಿದ್ದು ಮಕ್ಕಳಿಗೆ ಬೇಕಾದ ಉತ್ತಮ ಮಾಹಿತಿ ನೀಡುವುದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಶ್ಲಾಘನೇ ವ್ಯಕ್ತಪಡಿಸಿದರು.
ಸಂಪನ್ಮೂಲ ವ್ಯಕ್ತಿ ಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ದೇವಿಪ್ರಸಾದ್ ರವರು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯೊಂದಿಗೆ ಪ್ರತಿಜ್ಞೆ ಮಾಡಿಸಿದರು.

ಶಾಲಾ ಸಹಶಿಕ್ಷಕಿ ಸುಚಿತ್ರ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದವಿತ್ತರು. ಸೇವಾಪ್ರತಿನಿಧಿ ಸೇಸಪ್ಪ ಗೌಡ ಉಪಸ್ಥಿತರಿದ್ದರು.















