24.1 C
ಪುತ್ತೂರು, ಬೆಳ್ತಂಗಡಿ
May 26, 2025
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
 
ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್ ಡಿ ಎಂ ಐಟಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿರಿಯರು ಸಾಗಿಸುತ್ತಿದ್ದ ಜೀವನ ಮತ್ತು ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳ ಬಗ್ಗೆ ತಿಳಿಸಿದರು. 
 
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಸಂಸ್ಕೃತಿ ಸಾರುವ ಹಳೆಯ ವಸ್ತುಗಳ ಪ್ರದರ್ಶನ, ಆಟಿ ತಿಂಗಳಿನ ವಿಶೇಷ ಆಹಾರ ವಸ್ತುಗಳ ಪ್ರದರ್ಶನ, ಶಾಲೆಯ ಗದ್ದೆಯಲ್ಲಿ ಹಗ್ಗ ಜಗ್ಗಾಟ, ಲೆಮನ್ ಮತ್ತು ಸ್ಪೂನ್ ಓಟ ಹಾಗೂ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
 
ವಿದ್ಯಾರ್ಥಿಗಳಾದ ಚಿನ್ಮಯ್ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ನಿಧಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!