25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
 
ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್ ಡಿ ಎಂ ಐಟಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿರಿಯರು ಸಾಗಿಸುತ್ತಿದ್ದ ಜೀವನ ಮತ್ತು ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳ ಬಗ್ಗೆ ತಿಳಿಸಿದರು. 
 
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಸಂಸ್ಕೃತಿ ಸಾರುವ ಹಳೆಯ ವಸ್ತುಗಳ ಪ್ರದರ್ಶನ, ಆಟಿ ತಿಂಗಳಿನ ವಿಶೇಷ ಆಹಾರ ವಸ್ತುಗಳ ಪ್ರದರ್ಶನ, ಶಾಲೆಯ ಗದ್ದೆಯಲ್ಲಿ ಹಗ್ಗ ಜಗ್ಗಾಟ, ಲೆಮನ್ ಮತ್ತು ಸ್ಪೂನ್ ಓಟ ಹಾಗೂ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
 
ವಿದ್ಯಾರ್ಥಿಗಳಾದ ಚಿನ್ಮಯ್ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ನಿಧಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!