23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬದನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ,ಮತ್ತು ಸರಕಾರಿ ಪ್ರೌಢ ಶಾಲೆ ಬದನಾಜೆ ಇವರುಗಳು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು.

ವಲಯದ ಅಧ್ಯಕ್ಷರಾದ ಉಮ್ಮಾರಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿದರು

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.

ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಭೋದಿಸಿದರು.

ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜಮುನಾ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಉಮಾರಬ್ಬ ವಲಯಾಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಶ್ರೀ ಬಾಬು ನಾಯ್ಕ್ ಅಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆ ಉಪಸ್ಥಿತರಿದ್ದರು.

ಸಂಸ್ಥೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು
128 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ವಲಯ ಮೇಲ್ವಿಚಾರಕರು ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಾ ಭಾಗವಹಿಸಿದರು, ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

Related posts

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya
error: Content is protected !!