September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

ಗುಂಡೂರಿ : ಶ್ರೀ ಕ್ಷೆ.ಧ.ಗ್ರಾ.ಯೋ.ಗುಂಡೂರಿ ಒಕ್ಕೂಟ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗುಂಡೂರಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ ಆಯೋಜಿಸಲಾಯಿತು.

ಆರಂಬೋಡಿ ಗ್ರಾಮ ಪಂಚಾಯಿತು ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲ್, ಕಾರ್ಯದರ್ಶಿ ಶ್ರೀ ಸತೀಶ್ ಕುಲಾಲ್ ತುಂಬೆದಲೆಕ್ಕಿ, ಜನಜಾಗೃತಿ ತಾಲೂಕು ಸಮಿತಿ ಸದಸ್ಯ ಹರೀಶ್ ಕುಮಾರ್ ಪೊಕ್ಕಿ, ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಕೊಯಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತೇಜಸ್ವಿನಿ,ಕು! ದೀಕ್ಷಿತಾ, ವೇಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ, ದೈಹಿಕ ಶಿಕ್ಷಕ ಮಹಾವೀರ್ ಜೈನ್ ಕಜೆ, ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಉಷಾ ನೆಲ್ಯರಡ್ಡ, ಅಧ್ಯಕ್ಷೆ ಶ್ರೀಮತಿ ಸಂಗೀತಾ ಉಪಸ್ಥಿತರಿದ್ದರು.

ಶ್ರೀ ಪ್ರವೀಣ್ ಆಚಾರ್ಯ ಸ್ವಾಗತಿಸಿದರು, ಸೇವಾಪ್ರತಿನಿಧಿ ಹರೀಶ್ ಬಾಡಾರು ನಿರೂಪಿಸಿ ವಂದಿಸಿದರು.

Related posts

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!