July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

ಗುಂಡೂರಿ : ಶ್ರೀ ಕ್ಷೆ.ಧ.ಗ್ರಾ.ಯೋ.ಗುಂಡೂರಿ ಒಕ್ಕೂಟ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗುಂಡೂರಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ ಆಯೋಜಿಸಲಾಯಿತು.

ಆರಂಬೋಡಿ ಗ್ರಾಮ ಪಂಚಾಯಿತು ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲ್, ಕಾರ್ಯದರ್ಶಿ ಶ್ರೀ ಸತೀಶ್ ಕುಲಾಲ್ ತುಂಬೆದಲೆಕ್ಕಿ, ಜನಜಾಗೃತಿ ತಾಲೂಕು ಸಮಿತಿ ಸದಸ್ಯ ಹರೀಶ್ ಕುಮಾರ್ ಪೊಕ್ಕಿ, ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಕೊಯಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತೇಜಸ್ವಿನಿ,ಕು! ದೀಕ್ಷಿತಾ, ವೇಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ, ದೈಹಿಕ ಶಿಕ್ಷಕ ಮಹಾವೀರ್ ಜೈನ್ ಕಜೆ, ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಉಷಾ ನೆಲ್ಯರಡ್ಡ, ಅಧ್ಯಕ್ಷೆ ಶ್ರೀಮತಿ ಸಂಗೀತಾ ಉಪಸ್ಥಿತರಿದ್ದರು.

ಶ್ರೀ ಪ್ರವೀಣ್ ಆಚಾರ್ಯ ಸ್ವಾಗತಿಸಿದರು, ಸೇವಾಪ್ರತಿನಿಧಿ ಹರೀಶ್ ಬಾಡಾರು ನಿರೂಪಿಸಿ ವಂದಿಸಿದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya
error: Content is protected !!