25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಕೃತಿಯನ್ನು ಉಳಿಸಲು ಯಕ್ಷಗಾನವು ಪೂರಕ ಹಾಗೂ ಪ್ರೇರಕ ಶಕ್ತಿಯಾಗಿದೆ. ಮಕ್ಕಳ ಮೇಳಗಳನ್ನು ಸಮಾಜವು ಗುರುತಿಸುವ ಕಾರ್ಯವನ್ನು ಮಾಡಿ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕಿದೆ ಎಂದರು.


ವಾಸುದೇವ ಐತಾಳ್, ಸಂಚಾಲಕರು ಯಕ್ಷ ಶಿಕ್ಷಣದ ಸಂಚಾಲಕರು ಪ್ರಾಸ್ತಾವಿಕ ಭಾಷಣ ಮಾಡಿದರು.
ಗೌರವ ಅತಿಥಿಗಳಾಗಿ ಯುವ ಪ್ರತಿಭೆ ಅಕ್ಷಯ್ ಭಟ್ ಮತ್ತು ಜೀವಿತ್ ಪೆರಾಡಿ ಉಪಸ್ಥಿತರಿದ್ದರು.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ ಎಂದರು.
ಶಿಕ್ಷಕಿರಾದ ಸುನಿತಾ ಸ್ವಾಗತಿಸಿದರು. ನಯನಾ ವಂದಿಸಿದರು. ವಿದ್ಯಾಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!