38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಕೃತಿಯನ್ನು ಉಳಿಸಲು ಯಕ್ಷಗಾನವು ಪೂರಕ ಹಾಗೂ ಪ್ರೇರಕ ಶಕ್ತಿಯಾಗಿದೆ. ಮಕ್ಕಳ ಮೇಳಗಳನ್ನು ಸಮಾಜವು ಗುರುತಿಸುವ ಕಾರ್ಯವನ್ನು ಮಾಡಿ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕಿದೆ ಎಂದರು.


ವಾಸುದೇವ ಐತಾಳ್, ಸಂಚಾಲಕರು ಯಕ್ಷ ಶಿಕ್ಷಣದ ಸಂಚಾಲಕರು ಪ್ರಾಸ್ತಾವಿಕ ಭಾಷಣ ಮಾಡಿದರು.
ಗೌರವ ಅತಿಥಿಗಳಾಗಿ ಯುವ ಪ್ರತಿಭೆ ಅಕ್ಷಯ್ ಭಟ್ ಮತ್ತು ಜೀವಿತ್ ಪೆರಾಡಿ ಉಪಸ್ಥಿತರಿದ್ದರು.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ ಎಂದರು.
ಶಿಕ್ಷಕಿರಾದ ಸುನಿತಾ ಸ್ವಾಗತಿಸಿದರು. ನಯನಾ ವಂದಿಸಿದರು. ವಿದ್ಯಾಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!