22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಕೃತಿಯನ್ನು ಉಳಿಸಲು ಯಕ್ಷಗಾನವು ಪೂರಕ ಹಾಗೂ ಪ್ರೇರಕ ಶಕ್ತಿಯಾಗಿದೆ. ಮಕ್ಕಳ ಮೇಳಗಳನ್ನು ಸಮಾಜವು ಗುರುತಿಸುವ ಕಾರ್ಯವನ್ನು ಮಾಡಿ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕಿದೆ ಎಂದರು.


ವಾಸುದೇವ ಐತಾಳ್, ಸಂಚಾಲಕರು ಯಕ್ಷ ಶಿಕ್ಷಣದ ಸಂಚಾಲಕರು ಪ್ರಾಸ್ತಾವಿಕ ಭಾಷಣ ಮಾಡಿದರು.
ಗೌರವ ಅತಿಥಿಗಳಾಗಿ ಯುವ ಪ್ರತಿಭೆ ಅಕ್ಷಯ್ ಭಟ್ ಮತ್ತು ಜೀವಿತ್ ಪೆರಾಡಿ ಉಪಸ್ಥಿತರಿದ್ದರು.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ ಎಂದರು.
ಶಿಕ್ಷಕಿರಾದ ಸುನಿತಾ ಸ್ವಾಗತಿಸಿದರು. ನಯನಾ ವಂದಿಸಿದರು. ವಿದ್ಯಾಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!