September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ, ಹೂವಿನ ಪೂಜೆ ಮಧ್ಯಾಹ್ನ ಅನ್ನ ಸಂತರ್ಪಣೆ ಜರಗಿತು. ಸಂಜೆ ಜರಗಿದ ಆಟಿಕೋಲದಲ್ಲಿ ನೂರಾರು ಮಂದಿ ಭಕ್ತರು ಶ್ರೀ ದೈವದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ತುಲಾಭಾರ ಸೇವೆ ನಡೆಯಿತು.


ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ್ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಅರ್ಚಕರಾದ ವೇ|ಮೂ| ರಾಮದಾಸ ಅಸ್ರಣ್ಣರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಗುತ್ತುಬರ್ಕೆಯವರು, ವಿಕಾಸ್ ಜೈನ್ ಬಾಲ್ನಗುತ್ತು, ವಿಕಾಸ್ ಜೈನ್ ಬಾಲ್ನಗುತ್ತು ಹಾಗೂ ಗುರಿಕಾರರು ಉಪಸ್ಥಿತರಿದ್ದರು.

Related posts

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya
error: Content is protected !!