25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು ಸಂಜೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಮಹೇಶ್ ಶೆಟ್ಟಿಯವರಿಗೆ ಹೋರಾಟ ಮಾಡುವ ಉದ್ದೇಶದಿಂದ ರಕ್ಷಣೆಗಾಗಿ ಇಬ್ಬರು ಗನ್ ಮ್ಯಾನ್ ನೀಡಲು ಮನವಿ ನೀಡಿದ್ದರು.

ಮನವಿ ಸ್ವೀಕರಿಸಿದ ಗೃಹ ಸಚಿವ ಪರಮೇಶ್ವರ್ ದಕ್ಷಿಣ ಕನ್ನಡ ಎಸ್ಪಿ ರೀಷ್ಯಂತ್ ಅವರಿಗೆ ಗನ್ ಮ್ಯಾನ್ ನೀಡಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿಯವರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಗನ್ ಮ್ಯಾನ್ ಪಡೆಯಲು ಮನವಿ ಪತ್ರ ನೀಡಿದ್ದರು. ಇದರ ಬಗ್ಗೆ ಎಸ್ಪಿ ಗುಪ್ತಚರ ಇಲಾಖೆಗೆ ವರದಿ ನೀಡಲು ಆದೇಶ ನೀಡಿದ್ದರು. ಗುಪ್ತಚರ ಇಲಾಖೆಯ ವರದಿಯಲ್ಲಿ ಯಾವುದೇ ಜೀವ ಬೆದರಿಕೆಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಇಲ್ಲವೆಂದು ಎಸ್ಪಿಗೆ ಗುಪ್ತಚರ ಇಲಾಖೆ ವರದಿ ನೀಡಿದ್ದರು. ಅದ್ದರಿಂದ ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆ
ಮುಂದಾಗಿರಲಿಲ್ಲ.

Related posts

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!