23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು ಸಂಜೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಮಹೇಶ್ ಶೆಟ್ಟಿಯವರಿಗೆ ಹೋರಾಟ ಮಾಡುವ ಉದ್ದೇಶದಿಂದ ರಕ್ಷಣೆಗಾಗಿ ಇಬ್ಬರು ಗನ್ ಮ್ಯಾನ್ ನೀಡಲು ಮನವಿ ನೀಡಿದ್ದರು.

ಮನವಿ ಸ್ವೀಕರಿಸಿದ ಗೃಹ ಸಚಿವ ಪರಮೇಶ್ವರ್ ದಕ್ಷಿಣ ಕನ್ನಡ ಎಸ್ಪಿ ರೀಷ್ಯಂತ್ ಅವರಿಗೆ ಗನ್ ಮ್ಯಾನ್ ನೀಡಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿಯವರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಗನ್ ಮ್ಯಾನ್ ಪಡೆಯಲು ಮನವಿ ಪತ್ರ ನೀಡಿದ್ದರು. ಇದರ ಬಗ್ಗೆ ಎಸ್ಪಿ ಗುಪ್ತಚರ ಇಲಾಖೆಗೆ ವರದಿ ನೀಡಲು ಆದೇಶ ನೀಡಿದ್ದರು. ಗುಪ್ತಚರ ಇಲಾಖೆಯ ವರದಿಯಲ್ಲಿ ಯಾವುದೇ ಜೀವ ಬೆದರಿಕೆಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಇಲ್ಲವೆಂದು ಎಸ್ಪಿಗೆ ಗುಪ್ತಚರ ಇಲಾಖೆ ವರದಿ ನೀಡಿದ್ದರು. ಅದ್ದರಿಂದ ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆ
ಮುಂದಾಗಿರಲಿಲ್ಲ.

Related posts

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
error: Content is protected !!