24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

ಗುಂಡೂರಿ : ಶ್ರೀ ಕ್ಷೆ.ಧ.ಗ್ರಾ.ಯೋ.ಗುಂಡೂರಿ ಒಕ್ಕೂಟ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗುಂಡೂರಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ ಆಯೋಜಿಸಲಾಯಿತು.

ಆರಂಬೋಡಿ ಗ್ರಾಮ ಪಂಚಾಯಿತು ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲ್, ಕಾರ್ಯದರ್ಶಿ ಶ್ರೀ ಸತೀಶ್ ಕುಲಾಲ್ ತುಂಬೆದಲೆಕ್ಕಿ, ಜನಜಾಗೃತಿ ತಾಲೂಕು ಸಮಿತಿ ಸದಸ್ಯ ಹರೀಶ್ ಕುಮಾರ್ ಪೊಕ್ಕಿ, ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಕೊಯಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತೇಜಸ್ವಿನಿ,ಕು! ದೀಕ್ಷಿತಾ, ವೇಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ, ದೈಹಿಕ ಶಿಕ್ಷಕ ಮಹಾವೀರ್ ಜೈನ್ ಕಜೆ, ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಉಷಾ ನೆಲ್ಯರಡ್ಡ, ಅಧ್ಯಕ್ಷೆ ಶ್ರೀಮತಿ ಸಂಗೀತಾ ಉಪಸ್ಥಿತರಿದ್ದರು.

ಶ್ರೀ ಪ್ರವೀಣ್ ಆಚಾರ್ಯ ಸ್ವಾಗತಿಸಿದರು, ಸೇವಾಪ್ರತಿನಿಧಿ ಹರೀಶ್ ಬಾಡಾರು ನಿರೂಪಿಸಿ ವಂದಿಸಿದರು.

Related posts

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!