ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಪೂಜೆ ಮಾಡಿ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಸಮಿತಿ ಕಾರ್ಯದರ್ಶಿ ತುಕಾರಾಮ , ಸಮಿತಿ ಸದಸ್ಯರು ಮತ್ತು ಒಕ್ಕೂಟದ ವಲಯ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು , ದೇವಸ್ಥಾನದ ಪ್ರದಾನ ಅರ್ಚಕರು, ಉಜಿರೆ ವಲಯ, ಧರ್ಮಸ್ಥಳ ವಲಯ ಮೇಲ್ವಿಚಾರಕರು ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Comment

error: Content is protected !!