22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಕೃತಿಯನ್ನು ಉಳಿಸಲು ಯಕ್ಷಗಾನವು ಪೂರಕ ಹಾಗೂ ಪ್ರೇರಕ ಶಕ್ತಿಯಾಗಿದೆ. ಮಕ್ಕಳ ಮೇಳಗಳನ್ನು ಸಮಾಜವು ಗುರುತಿಸುವ ಕಾರ್ಯವನ್ನು ಮಾಡಿ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕಿದೆ ಎಂದರು.


ವಾಸುದೇವ ಐತಾಳ್, ಸಂಚಾಲಕರು ಯಕ್ಷ ಶಿಕ್ಷಣದ ಸಂಚಾಲಕರು ಪ್ರಾಸ್ತಾವಿಕ ಭಾಷಣ ಮಾಡಿದರು.
ಗೌರವ ಅತಿಥಿಗಳಾಗಿ ಯುವ ಪ್ರತಿಭೆ ಅಕ್ಷಯ್ ಭಟ್ ಮತ್ತು ಜೀವಿತ್ ಪೆರಾಡಿ ಉಪಸ್ಥಿತರಿದ್ದರು.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ ಎಂದರು.
ಶಿಕ್ಷಕಿರಾದ ಸುನಿತಾ ಸ್ವಾಗತಿಸಿದರು. ನಯನಾ ವಂದಿಸಿದರು. ವಿದ್ಯಾಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!