22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿಗಳ ಸಭೆಯು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಮತ್ತು ಶಾಕೀರ್ ಅಳಕೆಮಜಲು ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ ಅವರು ಆಗಮಿಸಿದ್ದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ದ್ವಜಾರೋಹಣವನ್ನು ಜಿಲ್ಲಾಧ್ಯ ಅನ್ವರ್ ಸದಾತ್ ಬಜತ್ತೂರು ನೆರವೇರಿಸಿದರು.

ಕಳೆದ ಅವಧಿಯ ಪಕ್ಷದ ಚಟುವಟಿಕೆಗಳ ವರದಿ ಮಂಡಿಸಿ, ಜಿಲ್ಲಾ ವೀಕ್ಷಕರ ಸಮ್ಮುಖದಲ್ಲಿ ಕ್ಷೇತ್ರ ಸಮಿತಿಯಲ್ಲಿ ಕೆಲವೊಂದು ಬದಲಾವಣೆ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ನೂತನ ಸಮಿತಿಯನ್ನು ಮತ್ತು ಬ್ಲಾಕ್ ಸಮಿತಿಯನ್ನು ಅಂತರಿಕ ಚುನಾವಣೆ ಮೂಲಕ ರಚಿಸಲಾಗಿದೆ.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ನವಾಝ್ ಕಟ್ಟೆ, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿಯಾಗಿ ಅಶ್ರಫ್ ಕಟ್ಟೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಪಂಚಾಯತ್ ಸದಸ್ಯರು, ಮಹಿಳಾ ಘಟಕದ ನಾಯಕಿಯರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!