April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

ಮರೋಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್‌ ಪಂದ್ಯಾಟವನ್ನು ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಉದ್ಘಾಟಿಸಲಾಯಿತು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಪಂದ್ಯಾಟಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.

ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌ ಅಧ್ಯಕ್ಷತೆ ವಹಿಸಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ ಕಿರಣ್‌, ದೈಹಿಕ ಶಿಕ್ಷಣ ನೋಡೆಲ್‌ ಅಧಿಕಾರಿ ಕೃಷ್ಣಪ್ಪ ಪೂಜಾರಿ, ಮರೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶುಭರಾಜ ಹೆಗ್ಡೆ, ಸದಸ್ಯ ಅಶೋಕ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಸದಸ್ಯ ಅಬೂಬಕ್ಕರ್‌ ಇದ್ದರು.

ಶಾಲಾ ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಸುಜಿತಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಅಕ್ಷತಾ ರಾಣಿ ವಂದಿಸಿದರು

ಫಲಿತಾಂಶ: ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸಾವ್ಯ ಸರ್ಕಾರಿ ಶಾಲೆ ಪ್ರಥಮ, ಅಳದಂಗಡಿ ಚರ್ಚ್ ಶಾಲೆ ದ್ವಿತೀಯ ಬಹುಮಾನ ಪಡೆದವು.

ಬಾಲಕಿಯರ ವಿಭಾಗದಲ್ಲಿ ಅಂಡಿಂಜೆ ಸರ್ಕಾರಿ ಶಾಲೆ ಪ್ರಥಮ ಮತ್ತು ಸಾವ್ಯ ಸರ್ಕಾರಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ನಾರಾವಿ ವಲಯದ ಎಂಟು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya
error: Content is protected !!