July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

ಮರೋಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್‌ ಪಂದ್ಯಾಟವನ್ನು ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಉದ್ಘಾಟಿಸಲಾಯಿತು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಪಂದ್ಯಾಟಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.

ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌ ಅಧ್ಯಕ್ಷತೆ ವಹಿಸಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ ಕಿರಣ್‌, ದೈಹಿಕ ಶಿಕ್ಷಣ ನೋಡೆಲ್‌ ಅಧಿಕಾರಿ ಕೃಷ್ಣಪ್ಪ ಪೂಜಾರಿ, ಮರೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶುಭರಾಜ ಹೆಗ್ಡೆ, ಸದಸ್ಯ ಅಶೋಕ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಸದಸ್ಯ ಅಬೂಬಕ್ಕರ್‌ ಇದ್ದರು.

ಶಾಲಾ ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಸುಜಿತಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಅಕ್ಷತಾ ರಾಣಿ ವಂದಿಸಿದರು

ಫಲಿತಾಂಶ: ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸಾವ್ಯ ಸರ್ಕಾರಿ ಶಾಲೆ ಪ್ರಥಮ, ಅಳದಂಗಡಿ ಚರ್ಚ್ ಶಾಲೆ ದ್ವಿತೀಯ ಬಹುಮಾನ ಪಡೆದವು.

ಬಾಲಕಿಯರ ವಿಭಾಗದಲ್ಲಿ ಅಂಡಿಂಜೆ ಸರ್ಕಾರಿ ಶಾಲೆ ಪ್ರಥಮ ಮತ್ತು ಸಾವ್ಯ ಸರ್ಕಾರಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ನಾರಾವಿ ವಲಯದ ಎಂಟು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!