25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

ಮರೋಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್‌ ಪಂದ್ಯಾಟವನ್ನು ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಉದ್ಘಾಟಿಸಲಾಯಿತು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಪಂದ್ಯಾಟಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.

ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌ ಅಧ್ಯಕ್ಷತೆ ವಹಿಸಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ ಕಿರಣ್‌, ದೈಹಿಕ ಶಿಕ್ಷಣ ನೋಡೆಲ್‌ ಅಧಿಕಾರಿ ಕೃಷ್ಣಪ್ಪ ಪೂಜಾರಿ, ಮರೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶುಭರಾಜ ಹೆಗ್ಡೆ, ಸದಸ್ಯ ಅಶೋಕ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಸದಸ್ಯ ಅಬೂಬಕ್ಕರ್‌ ಇದ್ದರು.

ಶಾಲಾ ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಸುಜಿತಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಅಕ್ಷತಾ ರಾಣಿ ವಂದಿಸಿದರು

ಫಲಿತಾಂಶ: ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸಾವ್ಯ ಸರ್ಕಾರಿ ಶಾಲೆ ಪ್ರಥಮ, ಅಳದಂಗಡಿ ಚರ್ಚ್ ಶಾಲೆ ದ್ವಿತೀಯ ಬಹುಮಾನ ಪಡೆದವು.

ಬಾಲಕಿಯರ ವಿಭಾಗದಲ್ಲಿ ಅಂಡಿಂಜೆ ಸರ್ಕಾರಿ ಶಾಲೆ ಪ್ರಥಮ ಮತ್ತು ಸಾವ್ಯ ಸರ್ಕಾರಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ನಾರಾವಿ ವಲಯದ ಎಂಟು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.

Related posts

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya
error: Content is protected !!