ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ವೇಣೂರು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಬಿಇ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ವೇಣೂರು ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.

Leave a Comment

error: Content is protected !!