32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಹತ್ಯಡ್ಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ಯಡ್ಕ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಹತ್ಯಡ್ಕ ಸಿಎ ಬ್ಯಾಂಕಿನ ಅಧ್ಯಕ್ಷ ರಾಘವೇಂದ್ರ ನಾಯಕ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಟಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಹಿಂದಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್, ಹತ್ಯಡ್ಕ ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ್ ಗೌಡ ಅಡ್ಕಡಿ, ಕುಶಾಲಪ್ಪ ಗೌಡ , ಸಿಬ್ಬಂದಿ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya
error: Content is protected !!