April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾಲು ಮಂಡಳಿ ಬೆಂಗಳೂರು ನಿರ್ದೇಶಕ ಹಾಗೂ ದ.ಕ,ಸ ಹಾಲು ಒಕ್ಕೂಟ ಮಂಗಳೂರು ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ ನೀಡಿದ್ದರು.

ಇವರಿಗೆ ಸಂಘದ ವತಿಯಿಂದ ಅಧ್ಯಕ್ಷ ಜನಾರ್ಧನ ಗೌಡ ಕೆ.ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿದರು.

ನಂತರ ಮಾತನಾಡಿದ ದಿವಾಕರ ಶೆಟ್ಟಿ ರವರು ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಸುಮಾರು 750 ಕಟ್ಟಡಗಳಲ್ಲಿ ಈ ಸಂಘದ ಕಟ್ಟಡ ಉತ್ತಮ ಗುಣಮಟ್ಟದ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ವಿಸ್ತಾರಣಾಧಿಕಾರಿ ರಾಜೇಶ್ ಕಾಮಾತ್ ಪಿ., ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಸಿರಿಲ್ ಪಿಂಟೊ, ನಿರ್ದೇಶಕರುಗಳಾದ ಕೇಶವ ಪೂಜಾರಿ ಕೆ., ಕುಶಾಲವತಿ, ಯೋಗಿನಿ, ನೇವಿಲ್ ಸ್ಟೀವನ್ ಮೊರಾಸ್., ಪ್ರವೀಣ್ ಪೂಜಾರಿ., ಗಿರಿಯಪ್ಪ ಗೌಡ ಕೆ., ವಸಂತ ನಾಯ್ಕ., ರಂಜನ್ ಹೆಚ್., ಗಂಗಯ್ಯ ಗೌಡ., ಮೋಹನ್ ದಾಸ್ ಶೆಟ್ಟಿ ಹಾಗೂ ರೇಖಾ ರುಕ್ಕಯ್ಯ ಉಪಸ್ಥಿತರಿದ್ದರು.


ಸಂಘದ ಕಾರ್ಯನಿರ್ವಣಾಧಿಕಾರಿ ಗುಲಾಬಿ ಹಾಗೂ ಸಿಬ್ಬಂದಿಗಳು ಭಾಗವಹಿಸಿ, ಸಹಕರಿಸಿದರು.

Related posts

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
error: Content is protected !!