July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾಲು ಮಂಡಳಿ ಬೆಂಗಳೂರು ನಿರ್ದೇಶಕ ಹಾಗೂ ದ.ಕ,ಸ ಹಾಲು ಒಕ್ಕೂಟ ಮಂಗಳೂರು ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ ನೀಡಿದ್ದರು.

ಇವರಿಗೆ ಸಂಘದ ವತಿಯಿಂದ ಅಧ್ಯಕ್ಷ ಜನಾರ್ಧನ ಗೌಡ ಕೆ.ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿದರು.

ನಂತರ ಮಾತನಾಡಿದ ದಿವಾಕರ ಶೆಟ್ಟಿ ರವರು ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಸುಮಾರು 750 ಕಟ್ಟಡಗಳಲ್ಲಿ ಈ ಸಂಘದ ಕಟ್ಟಡ ಉತ್ತಮ ಗುಣಮಟ್ಟದ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ವಿಸ್ತಾರಣಾಧಿಕಾರಿ ರಾಜೇಶ್ ಕಾಮಾತ್ ಪಿ., ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಸಿರಿಲ್ ಪಿಂಟೊ, ನಿರ್ದೇಶಕರುಗಳಾದ ಕೇಶವ ಪೂಜಾರಿ ಕೆ., ಕುಶಾಲವತಿ, ಯೋಗಿನಿ, ನೇವಿಲ್ ಸ್ಟೀವನ್ ಮೊರಾಸ್., ಪ್ರವೀಣ್ ಪೂಜಾರಿ., ಗಿರಿಯಪ್ಪ ಗೌಡ ಕೆ., ವಸಂತ ನಾಯ್ಕ., ರಂಜನ್ ಹೆಚ್., ಗಂಗಯ್ಯ ಗೌಡ., ಮೋಹನ್ ದಾಸ್ ಶೆಟ್ಟಿ ಹಾಗೂ ರೇಖಾ ರುಕ್ಕಯ್ಯ ಉಪಸ್ಥಿತರಿದ್ದರು.


ಸಂಘದ ಕಾರ್ಯನಿರ್ವಣಾಧಿಕಾರಿ ಗುಲಾಬಿ ಹಾಗೂ ಸಿಬ್ಬಂದಿಗಳು ಭಾಗವಹಿಸಿ, ಸಹಕರಿಸಿದರು.

Related posts

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!