September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾಲು ಮಂಡಳಿ ಬೆಂಗಳೂರು ನಿರ್ದೇಶಕ ಹಾಗೂ ದ.ಕ,ಸ ಹಾಲು ಒಕ್ಕೂಟ ಮಂಗಳೂರು ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ ನೀಡಿದ್ದರು.

ಇವರಿಗೆ ಸಂಘದ ವತಿಯಿಂದ ಅಧ್ಯಕ್ಷ ಜನಾರ್ಧನ ಗೌಡ ಕೆ.ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿದರು.

ನಂತರ ಮಾತನಾಡಿದ ದಿವಾಕರ ಶೆಟ್ಟಿ ರವರು ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಸುಮಾರು 750 ಕಟ್ಟಡಗಳಲ್ಲಿ ಈ ಸಂಘದ ಕಟ್ಟಡ ಉತ್ತಮ ಗುಣಮಟ್ಟದ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ವಿಸ್ತಾರಣಾಧಿಕಾರಿ ರಾಜೇಶ್ ಕಾಮಾತ್ ಪಿ., ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಸಿರಿಲ್ ಪಿಂಟೊ, ನಿರ್ದೇಶಕರುಗಳಾದ ಕೇಶವ ಪೂಜಾರಿ ಕೆ., ಕುಶಾಲವತಿ, ಯೋಗಿನಿ, ನೇವಿಲ್ ಸ್ಟೀವನ್ ಮೊರಾಸ್., ಪ್ರವೀಣ್ ಪೂಜಾರಿ., ಗಿರಿಯಪ್ಪ ಗೌಡ ಕೆ., ವಸಂತ ನಾಯ್ಕ., ರಂಜನ್ ಹೆಚ್., ಗಂಗಯ್ಯ ಗೌಡ., ಮೋಹನ್ ದಾಸ್ ಶೆಟ್ಟಿ ಹಾಗೂ ರೇಖಾ ರುಕ್ಕಯ್ಯ ಉಪಸ್ಥಿತರಿದ್ದರು.


ಸಂಘದ ಕಾರ್ಯನಿರ್ವಣಾಧಿಕಾರಿ ಗುಲಾಬಿ ಹಾಗೂ ಸಿಬ್ಬಂದಿಗಳು ಭಾಗವಹಿಸಿ, ಸಹಕರಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!