24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

ಉಜಿರೆ: ರೋಗಿ ತಾನೇ ಉಸಿರಾಡಲು ಆಗದ ಗಂಭೀರವಾದ ಅನಾರೋಗ್ಯದ ಸಂದರ್ಭದಲ್ಲಿ ಕೃತಕ ಉಸಿರಾಟದ ಅನಿವಾರ್ಯತೆ ಇರುತ್ತದೆ. ಯಾಂತ್ರಿಕ ವಾತಾಯನವು (ವೆಂಟಿಲೇಟರ್) ತುರ್ತು ಪರಿಸ್ಥಿಯಲ್ಲಿ ರೋಗಿಯ ಜೀವ ಉಳಿಸಬಲ್ಲದು. ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳಲ್ಲಿ ವೆಂಟೆಲೇಟರ್ ಅತೀ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತದೆ. ಈ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣೆಯ ತರಬೇತಿ ಆಯೋಜಿಸಲಾಗಿದೆ ಎಂದು ನಿರ್ದೇಶಕ ಎಂ. ಜನಾರ್ದನ್ ಹೇಳಿದರು.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ 9 ಹಾಸಿಗೆಗಳ ಸುಸಜ್ಜಿತ ಐಸಿಯು ಹಾಗೂ 4 ವೆಂಟಿಲೇಟರ್‌ಗಳನ್ನು ಹೊಂದಿದ್ದು, ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಇತ್ತೀಚೆಗೆ ಹೊಸ ತಂತ್ರಜ್ಞಾನ ಹೊಂದಿರುವ 29 ಲಕ್ಷ ಮೌಲ್ಯದ 2 ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದೆ. ಒಟ್ಟು 6 ವೆಂಟಿಲೇಟರ್‌ಗಳನ್ನು ಹೊಂದಿದೆ.


ಹೊಸ ತಂತ್ರಜ್ಞಾನ ಹೊಂದಿರುವ ಈ ವೆಂಟಿಲೇಟರ್‌ನಲ್ಲಿ ವಯಸ್ಕರು, ಮಕ್ಕಳು ಮತ್ತು ನವಜಾತ ಶಿಸುಗಳಿಗೆ ಹೊಂದಾಣಿಕೆಯಾಗುವಂತೆ ಅಲ್ಟ್ರಾ-ಪ್ರೀಮಿಯಂ ಕ್ಲಾಸ್ ವೆಂಟಿಲೇಟರ್‌ನ್ನು ಟ್ರಾಲಿಗೆ ಅಳವಡಿಸಲಾಗಿದೆ. ಇದು ಉತ್ತಮ ಗುಣಮಟ್ಟದ ಉಸಿರಾಟವನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಿರುವ ಪ್ಯಾರಾಮೀಟರ್ ರೋಗಿಯ ಪರಿಸ್ಥಿತಿಯನ್ನು ಅರ್ಥಗರ್ಭಿತವಾಗಿ ಮತ್ತು ಶೀಘ್ರವಾಗಿ ಗ್ರಹಿಸುವ ತ್ವರಿತ ವೀಕ್ಷಣಾ ತಂತ್ರಜ್ಞಾನವನ್ನು ಹೊಂದಿರುವುದರಿಂದ ರೋಗಿಗೆ ಉಸಿರಾಟದಲ್ಲಿ ವ್ಯತ್ಯಯವಾಗದಂತೆ ನಿಗಾವಹಿಸುತ್ತದೆ.


ಸುಧಾರಿತ ತಂತ್ರಜ್ವಾನ ಹೊಂದಿರುವ ವೆಂಟಿಲೇಟರ್‌ಗಳನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತು ವೈದ್ಯರು, ದಾದಿಯರು ಮತ್ತು ಟೆಕ್ನಿಶಿಯನ್‌ಗಳಿಗೆ ಬಿಪಿಎಲ್ ಕಂಪೆನಿಯವರು ತರಬೇತಿ ನಡೆಸಿಕೊಟ್ಟರು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!