25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿಗಳ ಸಭೆಯು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಮತ್ತು ಶಾಕೀರ್ ಅಳಕೆಮಜಲು ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ ಅವರು ಆಗಮಿಸಿದ್ದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ದ್ವಜಾರೋಹಣವನ್ನು ಜಿಲ್ಲಾಧ್ಯ ಅನ್ವರ್ ಸದಾತ್ ಬಜತ್ತೂರು ನೆರವೇರಿಸಿದರು.

ಕಳೆದ ಅವಧಿಯ ಪಕ್ಷದ ಚಟುವಟಿಕೆಗಳ ವರದಿ ಮಂಡಿಸಿ, ಜಿಲ್ಲಾ ವೀಕ್ಷಕರ ಸಮ್ಮುಖದಲ್ಲಿ ಕ್ಷೇತ್ರ ಸಮಿತಿಯಲ್ಲಿ ಕೆಲವೊಂದು ಬದಲಾವಣೆ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ನೂತನ ಸಮಿತಿಯನ್ನು ಮತ್ತು ಬ್ಲಾಕ್ ಸಮಿತಿಯನ್ನು ಅಂತರಿಕ ಚುನಾವಣೆ ಮೂಲಕ ರಚಿಸಲಾಗಿದೆ.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ನವಾಝ್ ಕಟ್ಟೆ, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿಯಾಗಿ ಅಶ್ರಫ್ ಕಟ್ಟೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಪಂಚಾಯತ್ ಸದಸ್ಯರು, ಮಹಿಳಾ ಘಟಕದ ನಾಯಕಿಯರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Related posts

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!