September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು.

ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್, ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು ಮಚ್ಚಿನ ಪ್ರೌಡಶಾಲೆ, ಅಜಿತ್ ಕೊಕ್ರಡಿ, ದೈಹಿಕ ಶಿಕ್ಷಕರು ಗೇರುಕಟ್ಟೆ ಪ್ರೌಡಶಾಲೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಶಾಲೆ ಮುಖ್ಯ ಶಿಕ್ಷಕ ಶ್ರೀ ಸಣ್ಣಪ್ಪ , ಕುಪ್ಪೆಟ್ಟಿ ಕ್ಲಸ್ಟರ್ ನ CRP ಶ್ರೀಮತಿ ಸಂಧ್ಯಾ ಶಾಲಿನಿ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ವೀಣಾ, ಶ್ರೀ ವಿಜಯ್,ಶ್ರೀ ಪ್ರಸಾದ್ ಕಡ್ತಿಲ ಮುಂತಾದವರು ವೇದಿಕೆಯಲ್ಲಿ ಹಾಜರಿದ್ದರು.

ಪಂದ್ಯಾಟದಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಕೊನೆಯಲ್ಲಿ ಪ್ರಥಮ ಬಹುಮಾನವನ್ನು ಪದ್ಮುಂಜ ಪ್ರೌಢ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ದ್ವಿತೀಯ ಸ್ಥಾನ ಪೆರ್ಲ ಬೈಪಾಡಿ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸುಭಾಷ್ ಚಂದ್ರ ಪ್ರಾಸ್ತಾವಿಕ ನುಡಿದರು, ಶ್ರೀಮತಿ ದಿವ್ಯ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮಾ ನೀರುಪಿಸಿದರು.

Related posts

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!