September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ- ಕಾಶಿಪಟ್ಣ ಇಲ್ಲಿಯ ಆಡಳಿತ ಮೊಕ್ತೇಸರ ಅನಂತ ಅಸ್ರಣ್ಣ ನೆರವೇರಿಸಿದರು.

ಸಭಾಧ್ಯಕ್ಷತೆಯನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ವಹಿಸಿದ್ದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಪಂಚಾಯತ್ ಸದಸ್ಯರು, ಎಸ್ ಡಿ ಎಂ ಸಿ ಉಪಾಧ್ಯಕ್ಷ ಯಶೋಧರ ನಲ್ಲರ ಬೆಟ್ಟು, ಊರ ಹಿರಿಯರಾದ ಶ್ರೀ ರಾಜು ಪೂಜಾರಿ, ಶ್ರೀಧರ ಪೂಜಾರಿ, ಸುಬ್ಬಣ್ಣ ಪೂಜಾರಿ, ಪಿಡಿಒ ಶ್ರೀಮತಿ ಆಶಾಲತಾ,ಪಂದ್ಯಾಟಗಳ ಸಂಯೋಜಕ ಕೋದಂಡರಾಮ, ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರೀನ್ ತಾಜ್ ಸ್ವಾಗತಿಸಿ, ಶ್ರೀಮತಿ ಹರಿಣಾಕ್ಷಿ ವಂದಿಸಿದರು. ದೇವುದಾಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಶಶಿಧರ್, ಶ್ರೀಮತಿ ಸೌಮ್ಯ, ಶ್ರೀಮತಿ ಸುಜಾತ ಸಹಕರಿಸಿದರು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಸರಕಾರಿ ಪ್ರೌಢಶಾಲೆ ಬಳಂಜ ,ದ್ವಿತೀಯ ಸ್ಥಾನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಪೆರಿಂಜೆ ಇಲ್ಲಿಯ ವಿದ್ಯಾರ್ಥಿಗಳು ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಎಲ್ಲರಿಗೂ ಶುಭ ಹಾರೈಸಿ ದಾನಿಗಳನ್ನು ಕೃತಜ್ಞತೆಯಿಂದ ನೆನೆದರು. ವೇದಿಕೆಯಲ್ಲಿ ಶಾಲಾ ನಿಕಟಪೂರ್ವ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್, ನಿಕಟಪೂರ್ವ ದ್ವಿತೀಯ ದರ್ಜೆ ಸಹಾಯಕಿ ಶ್ರೀಮತಿ ಸವಿತಾ ಹಾಗೂ ವಲಯದ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ರಾಜ್ಯ ಮಟ್ಟದ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya
error: Content is protected !!