25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

ಬೆಳ್ತಂಗಡಿ: ಪವಿತ್ರ ಉಮ್ರಾ ನಿರ್ವಹಣೆಗಾಗಿ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಬುರಾಕ್ ಇಂಟರ್ನ್ಯಾಷನಲ್ ಟ್ರಾವೆಲ್ಸ್ ಮೂಲಕ ಸೌದಿ ಅರೇಬಿಯಾ ಕ್ಕೆ ಪ್ರಯಾಣ ಬೆಳೆಸಿದ್ದ ಉಳ್ಳಾಲ ತಾಲೂಕಿನ ಮದನಿ ನಗರ ನಿವಾಸಿ ಝುಬೈದ ಎಂಬವರು ಅಸೌಖ್ಯದಿಂದ ಆ. 17 ರಂದು ಪವಿತ್ರ ಮಕ್ಕಾದಲ್ಲಿ ಇಹಲೋಕ ತ್ಯಜಿಸಿದರು.

ಕುಟುಂಬದ ಇಚ್ಛೆಯಂತೆ ಮೃತರ ದಫನ ಕಾರ್ಯ ಮಕ್ಕಾದಲ್ಲೇ ನಿರ್ವಹಿಸುವುದಾಗಿ ತೀರ್ಮಾನಿಸಿ, ಉಮ್ರಾ ಗ್ರೂಪ್ ಲೀಡರ್ ಅಬ್ದುಲ್ ಅಝೀಝ್ ಝುಹ್‌ರಿ ಕಿಲ್ಲೂರು ರವರ ನೇತೃತ್ವದಲ್ಲಿ ಮಕ್ಕಾದಲ್ಲಿ ದಫನ ಮಾಡಲು ಬೇಕಾದ ಎಲ್ಲಾ ದಾಖಲೆ ಪತ್ರಗಳ ತಯಾರಿಗಾಗಿ ಸಮಾಜ ಸೇವಕ ಶಾಕಿರ್ ಹಕ್ ನೆಲ್ಯಾಡಿ ಯವರ ಮೂಲಕ ಕ್ಲಪ್ತ ಸಮಯಕ್ಕೆ ಸಂಗ್ರಹಿಸಲಾಯಿತು.

ನಂತರ ಭಾರತದ ಕಾನ್ಸುಲೇಟ್ ನಿಂದ NOC ದೊರಕಿದ ನಂತರ ಮೃತರ ದಫನ ಕಾರ್ಯವನ್ನು ಮಕ್ಕಾದ ಹರಮ್ ಪರಿಸರದಲ್ಲಿ ನೆರವೇರಿಸಲಾಯಿತು.

ದಾಖಲೆ ಪತ್ರಗಳ ಸಂಗ್ರಹಕ್ಕಾಗಿ ಶಾಕಿರ್ ಹಕ್ ರವರಿಗೆ ಮಂಗಳೂರು ಇಂಟರ್ ನ್ಯಾಷನಲ್ ಉಮ್ರಾ ಟ್ರಾವೆಲ್ಸ್ ನ ಮಾಲಕ ಹಾಜಿ ಅಬೂಬಕ್ಕರ್ ಅಡ್ಡೂರು ಹಾಗೂ ಹೆಚ್‌ಐಎಫ್ ನಾಯರಾದ ರಿಜ್ವಾನ್ ಪಾಂಡೇಶ್ವರ ನೆರವಾದರು.ನಂತರ ನಡೆದ ದಫನ ಪ್ರಕ್ರಿಯೆಯಲ್ಲಿ ಕೆ ಸಿ ಎಫ್ ನಾಯಕ ಮೂಸ ಹಾಜಿ ಕಿನ್ಯ , ರಝಕ್ ಮುಸ್ಲಿಯಾರ್ ರಂತಡ್ಕ, ಲತೀಫ್ ನೆಲ್ಯಾಡಿ, ಹುಸೈನ್ ನೆಲ್ಯಾಡಿ, ಇಕ್ಬಾಲ್ ಕಕ್ಕಿಂಜೆ, ಹನೀಫ್ ಕೋಳಿಯೂರ್, ಶಾಕಿರ್ ಹಕ್ ನೆಲ್ಯಾಡಿ, ರನೀಝ್ ಗೇರುಕಟ್ಟೆ, ಮೃತರ ಪತಿ ಇಸ್ಮಾಯಿಲ್ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!