23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು.

ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್, ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು ಮಚ್ಚಿನ ಪ್ರೌಡಶಾಲೆ, ಅಜಿತ್ ಕೊಕ್ರಡಿ, ದೈಹಿಕ ಶಿಕ್ಷಕರು ಗೇರುಕಟ್ಟೆ ಪ್ರೌಡಶಾಲೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಶಾಲೆ ಮುಖ್ಯ ಶಿಕ್ಷಕ ಶ್ರೀ ಸಣ್ಣಪ್ಪ , ಕುಪ್ಪೆಟ್ಟಿ ಕ್ಲಸ್ಟರ್ ನ CRP ಶ್ರೀಮತಿ ಸಂಧ್ಯಾ ಶಾಲಿನಿ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ವೀಣಾ, ಶ್ರೀ ವಿಜಯ್,ಶ್ರೀ ಪ್ರಸಾದ್ ಕಡ್ತಿಲ ಮುಂತಾದವರು ವೇದಿಕೆಯಲ್ಲಿ ಹಾಜರಿದ್ದರು.

ಪಂದ್ಯಾಟದಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಕೊನೆಯಲ್ಲಿ ಪ್ರಥಮ ಬಹುಮಾನವನ್ನು ಪದ್ಮುಂಜ ಪ್ರೌಢ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ದ್ವಿತೀಯ ಸ್ಥಾನ ಪೆರ್ಲ ಬೈಪಾಡಿ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸುಭಾಷ್ ಚಂದ್ರ ಪ್ರಾಸ್ತಾವಿಕ ನುಡಿದರು, ಶ್ರೀಮತಿ ದಿವ್ಯ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮಾ ನೀರುಪಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya
error: Content is protected !!