September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು.

ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್, ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು ಮಚ್ಚಿನ ಪ್ರೌಡಶಾಲೆ, ಅಜಿತ್ ಕೊಕ್ರಡಿ, ದೈಹಿಕ ಶಿಕ್ಷಕರು ಗೇರುಕಟ್ಟೆ ಪ್ರೌಡಶಾಲೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಶಾಲೆ ಮುಖ್ಯ ಶಿಕ್ಷಕ ಶ್ರೀ ಸಣ್ಣಪ್ಪ , ಕುಪ್ಪೆಟ್ಟಿ ಕ್ಲಸ್ಟರ್ ನ CRP ಶ್ರೀಮತಿ ಸಂಧ್ಯಾ ಶಾಲಿನಿ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ವೀಣಾ, ಶ್ರೀ ವಿಜಯ್,ಶ್ರೀ ಪ್ರಸಾದ್ ಕಡ್ತಿಲ ಮುಂತಾದವರು ವೇದಿಕೆಯಲ್ಲಿ ಹಾಜರಿದ್ದರು.

ಪಂದ್ಯಾಟದಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಕೊನೆಯಲ್ಲಿ ಪ್ರಥಮ ಬಹುಮಾನವನ್ನು ಪದ್ಮುಂಜ ಪ್ರೌಢ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ದ್ವಿತೀಯ ಸ್ಥಾನ ಪೆರ್ಲ ಬೈಪಾಡಿ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸುಭಾಷ್ ಚಂದ್ರ ಪ್ರಾಸ್ತಾವಿಕ ನುಡಿದರು, ಶ್ರೀಮತಿ ದಿವ್ಯ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮಾ ನೀರುಪಿಸಿದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!