26.1 C
ಪುತ್ತೂರು, ಬೆಳ್ತಂಗಡಿ
March 31, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ- ಕಾಶಿಪಟ್ಣ ಇಲ್ಲಿಯ ಆಡಳಿತ ಮೊಕ್ತೇಸರ ಅನಂತ ಅಸ್ರಣ್ಣ ನೆರವೇರಿಸಿದರು.

ಸಭಾಧ್ಯಕ್ಷತೆಯನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ವಹಿಸಿದ್ದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಪಂಚಾಯತ್ ಸದಸ್ಯರು, ಎಸ್ ಡಿ ಎಂ ಸಿ ಉಪಾಧ್ಯಕ್ಷ ಯಶೋಧರ ನಲ್ಲರ ಬೆಟ್ಟು, ಊರ ಹಿರಿಯರಾದ ಶ್ರೀ ರಾಜು ಪೂಜಾರಿ, ಶ್ರೀಧರ ಪೂಜಾರಿ, ಸುಬ್ಬಣ್ಣ ಪೂಜಾರಿ, ಪಿಡಿಒ ಶ್ರೀಮತಿ ಆಶಾಲತಾ,ಪಂದ್ಯಾಟಗಳ ಸಂಯೋಜಕ ಕೋದಂಡರಾಮ, ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರೀನ್ ತಾಜ್ ಸ್ವಾಗತಿಸಿ, ಶ್ರೀಮತಿ ಹರಿಣಾಕ್ಷಿ ವಂದಿಸಿದರು. ದೇವುದಾಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಶಶಿಧರ್, ಶ್ರೀಮತಿ ಸೌಮ್ಯ, ಶ್ರೀಮತಿ ಸುಜಾತ ಸಹಕರಿಸಿದರು.

ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಸರಕಾರಿ ಪ್ರೌಢಶಾಲೆ ಬಳಂಜ ,ದ್ವಿತೀಯ ಸ್ಥಾನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಪೆರಿಂಜೆ ಇಲ್ಲಿಯ ವಿದ್ಯಾರ್ಥಿಗಳು ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಎಲ್ಲರಿಗೂ ಶುಭ ಹಾರೈಸಿ ದಾನಿಗಳನ್ನು ಕೃತಜ್ಞತೆಯಿಂದ ನೆನೆದರು. ವೇದಿಕೆಯಲ್ಲಿ ಶಾಲಾ ನಿಕಟಪೂರ್ವ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್, ನಿಕಟಪೂರ್ವ ದ್ವಿತೀಯ ದರ್ಜೆ ಸಹಾಯಕಿ ಶ್ರೀಮತಿ ಸವಿತಾ ಹಾಗೂ ವಲಯದ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

Related posts

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya
error: Content is protected !!