23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

ಬೆಳ್ತಂಗಡಿ: ಪವಿತ್ರ ಉಮ್ರಾ ನಿರ್ವಹಣೆಗಾಗಿ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಬುರಾಕ್ ಇಂಟರ್ನ್ಯಾಷನಲ್ ಟ್ರಾವೆಲ್ಸ್ ಮೂಲಕ ಸೌದಿ ಅರೇಬಿಯಾ ಕ್ಕೆ ಪ್ರಯಾಣ ಬೆಳೆಸಿದ್ದ ಉಳ್ಳಾಲ ತಾಲೂಕಿನ ಮದನಿ ನಗರ ನಿವಾಸಿ ಝುಬೈದ ಎಂಬವರು ಅಸೌಖ್ಯದಿಂದ ಆ. 17 ರಂದು ಪವಿತ್ರ ಮಕ್ಕಾದಲ್ಲಿ ಇಹಲೋಕ ತ್ಯಜಿಸಿದರು.

ಕುಟುಂಬದ ಇಚ್ಛೆಯಂತೆ ಮೃತರ ದಫನ ಕಾರ್ಯ ಮಕ್ಕಾದಲ್ಲೇ ನಿರ್ವಹಿಸುವುದಾಗಿ ತೀರ್ಮಾನಿಸಿ, ಉಮ್ರಾ ಗ್ರೂಪ್ ಲೀಡರ್ ಅಬ್ದುಲ್ ಅಝೀಝ್ ಝುಹ್‌ರಿ ಕಿಲ್ಲೂರು ರವರ ನೇತೃತ್ವದಲ್ಲಿ ಮಕ್ಕಾದಲ್ಲಿ ದಫನ ಮಾಡಲು ಬೇಕಾದ ಎಲ್ಲಾ ದಾಖಲೆ ಪತ್ರಗಳ ತಯಾರಿಗಾಗಿ ಸಮಾಜ ಸೇವಕ ಶಾಕಿರ್ ಹಕ್ ನೆಲ್ಯಾಡಿ ಯವರ ಮೂಲಕ ಕ್ಲಪ್ತ ಸಮಯಕ್ಕೆ ಸಂಗ್ರಹಿಸಲಾಯಿತು.

ನಂತರ ಭಾರತದ ಕಾನ್ಸುಲೇಟ್ ನಿಂದ NOC ದೊರಕಿದ ನಂತರ ಮೃತರ ದಫನ ಕಾರ್ಯವನ್ನು ಮಕ್ಕಾದ ಹರಮ್ ಪರಿಸರದಲ್ಲಿ ನೆರವೇರಿಸಲಾಯಿತು.

ದಾಖಲೆ ಪತ್ರಗಳ ಸಂಗ್ರಹಕ್ಕಾಗಿ ಶಾಕಿರ್ ಹಕ್ ರವರಿಗೆ ಮಂಗಳೂರು ಇಂಟರ್ ನ್ಯಾಷನಲ್ ಉಮ್ರಾ ಟ್ರಾವೆಲ್ಸ್ ನ ಮಾಲಕ ಹಾಜಿ ಅಬೂಬಕ್ಕರ್ ಅಡ್ಡೂರು ಹಾಗೂ ಹೆಚ್‌ಐಎಫ್ ನಾಯರಾದ ರಿಜ್ವಾನ್ ಪಾಂಡೇಶ್ವರ ನೆರವಾದರು.ನಂತರ ನಡೆದ ದಫನ ಪ್ರಕ್ರಿಯೆಯಲ್ಲಿ ಕೆ ಸಿ ಎಫ್ ನಾಯಕ ಮೂಸ ಹಾಜಿ ಕಿನ್ಯ , ರಝಕ್ ಮುಸ್ಲಿಯಾರ್ ರಂತಡ್ಕ, ಲತೀಫ್ ನೆಲ್ಯಾಡಿ, ಹುಸೈನ್ ನೆಲ್ಯಾಡಿ, ಇಕ್ಬಾಲ್ ಕಕ್ಕಿಂಜೆ, ಹನೀಫ್ ಕೋಳಿಯೂರ್, ಶಾಕಿರ್ ಹಕ್ ನೆಲ್ಯಾಡಿ, ರನೀಝ್ ಗೇರುಕಟ್ಟೆ, ಮೃತರ ಪತಿ ಇಸ್ಮಾಯಿಲ್ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
error: Content is protected !!