37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು.

ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್, ಸುಭಾಷ್ ಚಂದ್ರ, ದೈಹಿಕ ಶಿಕ್ಷಕರು ಮಚ್ಚಿನ ಪ್ರೌಡಶಾಲೆ, ಅಜಿತ್ ಕೊಕ್ರಡಿ, ದೈಹಿಕ ಶಿಕ್ಷಕರು ಗೇರುಕಟ್ಟೆ ಪ್ರೌಡಶಾಲೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಶಾಲೆ ಮುಖ್ಯ ಶಿಕ್ಷಕ ಶ್ರೀ ಸಣ್ಣಪ್ಪ , ಕುಪ್ಪೆಟ್ಟಿ ಕ್ಲಸ್ಟರ್ ನ CRP ಶ್ರೀಮತಿ ಸಂಧ್ಯಾ ಶಾಲಿನಿ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ವೀಣಾ, ಶ್ರೀ ವಿಜಯ್,ಶ್ರೀ ಪ್ರಸಾದ್ ಕಡ್ತಿಲ ಮುಂತಾದವರು ವೇದಿಕೆಯಲ್ಲಿ ಹಾಜರಿದ್ದರು.

ಪಂದ್ಯಾಟದಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಕೊನೆಯಲ್ಲಿ ಪ್ರಥಮ ಬಹುಮಾನವನ್ನು ಪದ್ಮುಂಜ ಪ್ರೌಢ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ದ್ವಿತೀಯ ಸ್ಥಾನ ಪೆರ್ಲ ಬೈಪಾಡಿ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸುಭಾಷ್ ಚಂದ್ರ ಪ್ರಾಸ್ತಾವಿಕ ನುಡಿದರು, ಶ್ರೀಮತಿ ದಿವ್ಯ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮಾ ನೀರುಪಿಸಿದರು.

Related posts

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya
error: Content is protected !!