24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!