25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿಗಳನ್ನು ಪಡೆದು ಕೊಂಡರು. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

‌ಸೌಜನ್ಯಳ ಸಹೋದರರ ಶಿಕ್ಷಣ ಮುಗಿದಿದ್ದು ಮನೆಯಲ್ಲಿ ಯಾರಿಗಾದರೂ ಸರಕಾರಿ ಉದ್ಯೋಗ ನೀಡಲು ಸಾದ್ಯವಿದೆಯೇ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ತಿಳಿಸಿದರು.

ಈ ಪರಿಸರಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ಇಲ್ಲೊಂದು ಅಂಗನವಾಡಿ ಕೇಂದ್ರವಿರಬೇಕು ಎಂಬ ಬಗೆಗೆ ಬಹುದಿನಗಳಿಂದ ಬೇಡಿಕೆಯಿರುವುದಾಗಿ ಸೌಜನ್ಯಳ ಮನೆಯವರು ತಿಳಿಸಿದಾಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!